ನಮಸ್ಕಾರ ಸ್ನೇಹಿತರೇ , ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಎಸ್ಸಿ ಎಸ್ಟಿ ವರ್ಗಕ್ಕೆ ಸೇರಿದವರಿಗೆ ಸಬ್ಸಿಡಿ ಸಾಲಕ್ಕಾಗಿ ಅರ್ಜಿ ಆಹ್ವಾನವನ್ನು ನೀಡಿರುವುದರ ಬಗ್ಗೆ. ಸ್ವಂತ ಉದ್ಯೋಗವನ್ನು ಮಾಡಿಕೊಳ್ಳಲು ಸರ್ಕಾರವು ಎಸ್ ಸಿ ಎಸ್ ಟಿ ವರ್ಗಕ್ಕೆ ಸೇರಿದ ಜನರಿಗೆ ಇದೀಗ ಒಂದು ಉತ್ತಮವಾದ ಅವಕಾಶವನ್ನು ಕಲ್ಪಿಸಿದೆ. ಈ ಯೋಜನೆಯ ಮೂಲಕ ಇದರ ಪ್ರಯೋಜನವನ್ನು ಪಡೆದುಕೊಂಡು ಸ್ವಂತ ಉದ್ಯೋಗವನ್ನು ಈ ವರ್ಗದ ಜನರು ಸೃಷ್ಟಿಸಿಕೊಳ್ಳಬಹುದಾಗಿದೆ. ಎಸ್ ಸಿ ಎಸ್ ಟಿ ವರ್ಗಕ್ಕೆ ಸೇರಿದವರಿಗೆ ಯಾವ ಯೋಜನೆಯನ್ನು ಸರ್ಕಾರವು ಜಾರಿಗೆ ತಂದಿದೆ ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಹುದಾಗಿದೆ.
ಸಬ್ಸಿಡಿ ಸಾಲ :
ಎಸ್ ಸಿ ಎಸ್ ಟಿ ವರ್ಗಕ್ಕೆ ಸೇರಿದಂತಹ ಜನರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಆರ್ಥಿಕ ಅಭಿವೃದ್ಧಿ ಯೋಜನೆಗಳಲ್ಲಿ 2023 24ನೇ ಸಾಲಿಗೆ ಲೋನ್ ಪಡೆಯಲು ರಾಜ್ಯ ಸರ್ಕಾರವು ಅರ್ಜಿಯನ್ನು ಆಹ್ವಾನಿಸಿದೆ. ಎಲ್ಲರೂ ಸಹ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ವೇಳೆ ನೀವೇನಾದರೂ ಎಸ್ಸಿ-ಎಸ್ಟಿ ವರ್ಗಕ್ಕೆ ಸೇರಿದ್ದು ಕೆಲಸದ ವಿಚಾರವಾಗಿ ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದರೆ ಸರ್ಕಾರವು ಜಾರಿಗೆ ತಂದಿರುವಂತಹ ಈ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಈ ಯೋಜನೆಯ ಪ್ರಯೋಜನವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಈ ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಸ್ವಂತ ಉದ್ಯೋಗಕ್ಕಾಗಿ ನೆರವನ್ನು ಪಡೆಯಬಹುದಾಗಿದ್ದು ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಎಂದು ಇದನ್ನು ಕರೆಯಲಾಗುತ್ತದೆ. ಸಹಾಯಧನವನ್ನು ಹಣಕಾಸಿನ ವಿಚಾರದ ಕೆಲಸಕ್ಕಾಗಿ ಈ ಯೋಜನೆಯ ಅಡಿಯಲ್ಲಿ ಮಂಜೂರು ಮಾಡಲಾಗುತ್ತದೆ. ಈ ಯೋಜನೆಯ ಅಡಿಯಲ್ಲಿ ಸಾಲಕ್ಕೆ ನಾಲ್ಕು ಪರ್ಸೆಂಟ್ ಬಡ್ಡಿ ದರದಲ್ಲಿ 50,000 ಗಳ ಸಾಲ ಹಾಗೂ 50,000ಗಳ ಸಹಾಯಧನವನ್ನು ಪಡೆಯಬಹುದಾಗಿದೆ.
ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು :
ಬ್ಯಾಂಕುಗಳ ಮೂಲಕ ಎಸ್ ಸಿ ಎಸ್ ಟಿ ವರ್ಗದವರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿತ್ತು ಈ ಯೋಜನೆಗೆ ಸಂಬಂಧಿಸಿ ದಂತೆ ಇದರಲ್ಲಿ ಬಿಸಿನೆಸ್ ಮತ್ತು ಬೇರೆ ಕೆಲಸಕ್ಕೂ ಸಹಾಯಧನವನ್ನು ಪಡೆಯಬಹುದಾಗಿದೆ. ಇಲಾಖೆಯಿಂದ ನಿಮಗೆ ಸಹಾಯಧನವನ್ನು ನೀಡಲಾಗುತ್ತಿದ್ದು ಬ್ಯಾಂಕ್ನಿಂದ ಸಾಲವು ಸಿಗುತ್ತದೆ. ಎಪ್ಪತ್ತು ಪರ್ಸೆಂಟ್ ಇಂದ ಸಹಾಯಧನ ಅಥವಾ ಒಂದು ಲಕ್ಷ ಘಟಕದ ಖರ್ಚಿಗೆ ಹಾಗೂ 2 ಲಕ್ಷ ರೂಪಾಯಿಗಳು ಸಾಲವನ್ನು ಪಡೆಯಬಹುದಾಗಿದೆ. 75% ಸಹಾಯಧನ ಅಂದರೆ 4 ಲಕ್ಷದವರೆಗೆ ಘಟಕದ ವೆಚ್ಚಕ್ಕೆ ಸ್ವಾವಲಂಬಿ ಎಲ್ಲೋ ಬೋರ್ಡ್ ಟ್ಯಾಕ್ಸಿ ಖರೀದಿಗೆ ಸಹಾಯಧನವನ್ನು ಈ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ.
ಸಣ್ಣ ಉದ್ಯಮಕ್ಕಾಗಿ ಈ ಯೋಜನೆಯ ಸೌಲಭ್ಯವನ್ನು ಮಹಿಳಾ ಸ್ವಸಹಾಯ ಸಂಘದ 10 ಅಭ್ಯರ್ಥಿಗಳು ಪಡೆದು ಕೊಳ್ಳಬಹುದು. ಈ ಯೋಜನೆಯ ಅಡಿಯಲ್ಲಿ ನಾಲ್ಕು ಪರ್ಸೆಂಟ್ ಬಡ್ಡಿದರದಲ್ಲಿ ಒಂದು ಲಕ್ಷದವರೆಗೆ ಸಾಲವನ್ನು ಪಡೆಯಬಹುದು. ಭೂಮಿ ಇಲ್ಲದ ಮಹಿಳಾ ಕಾರ್ಮಿಕರಿಗೆ ಕೃಷಿ ಭೂಮಿಯನ್ನು ಖರೀದಿ ಮಾಡುವ ಸಲುವಾಗಿ ಈ ಯೋಜನೆಯು ಸಾಲವನ್ನು ನೀಡುತ್ತದೆ.
ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ : ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಗಂಗಾ ಕಲ್ಯಾಣ ಯೋಜನೆ ಗೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು ಅಥವಾ ಆಯ ನಿಗಮಕ್ಕೆ ಸೇರಿದ ಕಚೇರಿಗೆ ಭೇಟಿ ನೀಡಿ ಸೇವಾ ಸಿಂಧು ಫೋಟೋನಲ್ಲಿಯೂ ಸಹ ಈ ಯೋಜನೆಗೆ ಸಂಬಂಧಿಸಿ ದಂತೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಪಡೆಯಬೇಕಾದರೆ ಸಹಾಯವಾಣಿ ಸಂಖ್ಯೆ 9482300400 ಈ ಯೋಜನೆಗೆ ಸಂಬಂಧಿಸಿದಂತೆ ಎಲ್ಲ ಮಾಹಿತಿಯನ್ನು ಪಡೆಯಬಹುದಾಗಿದೆ.
ಒಟ್ಟಾರೆಯಾಗಿ ಎಸ್ಸಿ ಎಸ್ಟಿ ಬಡವರ್ಗದ ಜನರಿಗಾಗಿ ರಾಜ್ಯ ಸರ್ಕಾರವು ಈ ಯೋಜನೆಯನ್ನು ವಿಸ್ತರಿಸಿದ್ದು ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯುವುದರ ಮೂಲಕ ಸ್ವಂತ ಉದ್ಯೋಗವನ್ನು ಬಡವರ್ಗದ ಜನರು ಮಾಡಬಹುದಾಗಿದೆ. ನಿಮ್ಮೆಲ್ಲಾ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಹಾಗೂ ಎಸ್ಸಿ ಎಸ್ಟಿ ವರ್ಗಕ್ಕೆ ಸೇರಿದಂತಹ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಅದರಿಂದ ಸ್ವಂತ ಉದ್ಯೋಗಕ್ಕಾಗಿ ಸಾಲವನ್ನು ಸರ್ಕಾರದಿಂದ ಪಡೆಯಬಹುದಾಗಿದೆ ಎಂಬುವುದರ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
ಕರ್ನಾಟಕದ ವಿದ್ಯಾರ್ಥಿಗಳಿಗೆ 20 ಸಾವಿರ ಸ್ಕಾಲರ್ಶಿಪ್ ಇಂದೇ ಅಪ್ಲೈ ಮಾಡಿ ಎಲ್ಲಾ ವಿದ್ಯಾರ್ಥಿಗಳಿಗೂ ಸಿಗುತ್ತೆ